30.4 C
Hubli
ಏಪ್ರಿಲ್ 24, 2024
eNews Land
ಸುದ್ದಿ

ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಇಎನ್ಎಲ್ ಹುಬ್ಬಳ್ಳಿ
ಪ್ರಸ್ತುತ ಶೈಕ್ಷಣಿಕ ವರ್ಷದ ಮೂರು ಮತ್ತು ಐದನೇ ಸೆಮಿಸ್ಟರ್ ಕಾನೂನು ತರಗತಿಯನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎನ್‌ಎಸ್ಯುಐ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ೨ನೇ ದಿನ ಪೂರೈಸಿದೆ.
ಮೊದಲ ಮತ್ತು ಎರಡನೇ ವರ್ಷದ ಕಾನೂನು ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಆಕ್ಟೋಬರನಲ್ಲಿ ಮುಗಿದು, ಈ ತಿಂಗಳಲ್ಲಿ ಮುಂದಿನ ತರಗತಿಗಳು ಆರಂಭವಾಗಬೇಕಿತ್ತು. ಆದರೆ, ವಿಶ್ವವಿದ್ಯಾಲಯ ಪರೀಕ್ಷೆ ನಡೆಸದೆ, ಮುಂದಿನ ಸೆಮಿಸ್ಟರ್ ತರಗತಿಯನ್ನೂ ನಡೆಸದೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಬಾರ್ ಕೌನ್ಸಿಲ್ ಮಾರ್ಗಸೂಚಿಗಳನ್ನು ಅನುಸರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲೇಬೇಕು ಎಂದು ಕುಲಪತಿ ಡಾ. ಈಶ್ವರ ಭಟ್ ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿಗಳು, ಯಾವುದೇ ಕಾರಣಕ್ಕೂ ಭೌತಿಕವಾಗಿ ಪರೀಕ್ಷೆ ನಡೆಸಬಾರದು. ಆನ್ಲೈನ್ ಅಥವಾ ಅಸೈನ್ಮೆಂಟ್ ಮಾದರಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.
ಕಾನೂನು ಇಲಾಖೆಯನ್ನು ಸಂಪರ್ಕಿಸಿ ಮುಂದಿನ ನಿರ್ಧಾರ ತಿಳಿಸುವುದಾಗಿ ಕುಲಪತಿ ಹೇಳಿದಾಗ, ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ವಿದ್ಯಾರ್ಥಿಗಳು ಹಿಂತೆಗೆದುಕೊಂಡರು. ಕುಲಪತಿಯಿಂದ ಸಕಾರಾತ್ಮಕ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನೆ ಮುಂದುವರಿಸಿ, ಕುಲಪತಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಪೊಲೀಸರ ಮತ್ತು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ನೂರಾರು ವಿದ್ಯಾರ್ಥಿಗಳು ಪಾಲ್ಗೊoಡಿದ್ದರು. ಈ ವೇಳೆ
ಸಂತೋಷ ನಂದೂರ, ಮಂಜುನಾಥ, ಶಂಕರ ಪಾಟೀಲ ಸೇರಿದಂತೆ ನೂರಾರು ವಿದ್ಯಾರ್ಥಿಗಳಿದ್ದರು.
ಪರೀಕ್ಷೆ ಕುರಿತು ಸರ್ವೇ ನಡೆಸಿದಾಗ ಬಹುತೇಕ ವಿದ್ಯಾರ್ಥಿಗಳು ಆನ್‌ಲೈನ್ ಪರೀಕ್ಷೆ ಬೇಡ, ಭೌತಿಕ ಪರೀಕ್ಷೆ ನಡೆಸಿ ಎಂದು ಕೋರಿದ್ದಾರೆ. ನ್ಯಾಾಯಾಲಯವೂ ಪರೀಕ್ಷೆ ನಡೆಸಲು ನಿರ್ದೇಶನ ನೀಡಿದೆ. ಹೀಗಾಗಿ ಪರೀಕ್ಷೆ ನಡೆಸಬೇಕಿದೆ ಎಂದು
ಕೆಎಸ್‌ಎಲ್‌ಯು ಉಪಕುಲಪತಿ ಈಶ್ವರ ಭಟ್ ತಿಳಿಸಿದ್ದಾರೆ

Related posts

ಕುಂದಗೋಳ: ಪ್ರಸಿದ್ಧ ಸಂಗೀತ ಕಲಾವಿದರ ಪುಣ್ಯಭೂಮಿ: ಡಾ.ಬಂಡು ಕುಲಕರ್ಣಿ

eNEWS LAND Team

ಅವ್ನೌವ್ನ! ಹ್ಯಾಂಗ್ ಹ್ಯಾಂಗ್ ಆನ್ಲೈನ್ ದೋಖಾ ಮಾಡ್ತಾರ! ಹುಬ್ಳಿ ಮನಷ್ಯಾಗ ಹ್ಯಾಂಗ ಟೋಪಿ ಹಾಕ್ಯಾರ ನೋಡ್ರಿ

eNewsLand Team

ಪಠ್ಯದ ಜೊತೆಗೆ ಪಠ್ಯೇತರ ಚಟುವಟಕೆ ಅವಶ್ಯ: ಡಾ.ಮೋತಿಲಾಲ್ ರಾಠೋಡ

eNewsLand Team