25.5 C
Hubli
ಏಪ್ರಿಲ್ 27, 2024
eNews Land
ಸುದ್ದಿ

ತುಮರಿಕೊಪ್ಪ ವ ರಂಗಾಪೂರ ಗ್ರಾಮದ ಗಣಪತಿ ಜಾತ್ರಾ ಮಹೋತ್ಸವ. ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇಎನ್ಎಲ್ ಕಲಘಟಗಿ: ತಾಲೂಕಿನ ತುಮರಿಕೊಪ್ಪ ವ ರಂಗಾಪೂರ ಗ್ರಾಮದ ಶ್ರೀ ಗಣಪತಿ ದೇವರ 5ನೇ ಜಾತ್ರಾ ಮಹೋತ್ಸವ ಇದೇ ಏ.26 ಮಂಗಳವಾರ ಜರುಗಲಿದೆ. ಬೆಳಿಗ್ಗೆ ಕುಂಭಮೇಳ, ಸಕಲ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಗಣಪತಿ ದೇವರ ಮೆರವಣಿಗೆ ಜರುಗುವುದು. ದಿವ್ಯ ಸಾನಿಧ್ಯವನ್ನು ನವಲಗುಂದ ಗವಿಮಠದ ಪ.ಪೂ.ಶ್ರೀಬಸವಲಿಂಗ ಮಹಾಸ್ವಾಮಿಗಳು, ಬಮ್ಮಿಗಟ್ಟಿಯ ಶ್ರೀ ಸದ್ಗುರು ಸಿದ್ಧಾರೂಢ ಬೃಹನ್ಮಠದ ಶ್ರೀ ಸದ್ಗುರು ದಯಾನಂದ ಮಹಾಸ್ವಾಮಿಗಳು, ಸಾನಿಧ್ಯವನ್ನು ತುಮರಿಕೊಪ್ಪದ ವೇ.ಮೂ.ಶ್ರೀ ಈರಯ್ಯ ಸಿದ್ದಯ್ಯ ಹೀರೆಮಠ ವಹಿಸುವರು. ವಿಶೇಷ ಆಮಂತ್ರಿತರಾಗಿ ಶಾಸಕ ಸಿ.ಎಮ್.ನಿಂಬಣ್ಣವರ, ಮಾಜಿ ಸಚಿವ ಸಂತೋಷ ಲಾಡ್, ಜಿ.ಪಂ.ಮಾಜಿ ಸದಸ್ಯ ವಾಯ್.ಬಿ.ದಾಸನಕೊಪ್ಪ , ಆಯ್.ಸಿ.ಗೋಕುಲ, ಮುಂತಾದವರು ಭಾಗವಹಿಸುವರು. ಸಹಸ್ರ ಸಂಖ್ಯೆಯಲ್ಲಿ ಸದ್ಭಕ್ತರು ಆಗಮಿಸಿ ಶ್ರೀ ಗಣಪತಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟನೆಗೆ ತಿಳಿಸಿದ್ದಾರೆ.

Related posts

ಬಿಸಿಗಾಳಿಗೆ ಐವತ್ತು ಸಾವು? ಘೋರ ದುರಂತ ಆಗಿರೋದೆಲ್ಲಿ? ರೆಡ್ ಅಲರ್ಟ್!!

eNewsLand Team

ಮನೆಯಿಂದಲೇ ಮತದಾನ ಮಾಡಲು ಒಪ್ಪಿಗೆ ನೀಡಿದ ವಿಕಲಚೇತನರ ಹಾಗೂ 80 + ವಯಸ್ಸಾದವರ ಮನೆಗೆ ಏ.29,30 ಹಾಗೂ ಮೇ 1 ರಂದು ಚುನಾವಾಣಾ ಸಿಬ್ಬಂದಿ ಭೇಟಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

eNEWS LAND Team

ಮುಂದಿನ ವರ್ಷದಿಂದ ಜಿಲ್ಲಾ ಕೇಂದ್ರಗಳಲ್ಲಿ ಸರ್.ಎಮ್.ವಿ ಜನ್ಮ ದಿನಾಚರಣೆ: ಸಿಎಂ ಬೊಮ್ಮಾಯಿ

eNEWS LAND Team