eNews Land
ಸುದ್ದಿ

ಧಾರವಾಡ ಜಿಲ್ಲಾ ಪಂಚಾಯತ ನೂತನ ಸಿಇಓ ಆಗಿ ಡಾ.ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ

Listen to this article

ಇಎನ್ಎಲ್ ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಸುರೇಶ ಇಟ್ನಾಳ ಅವರು ಸೋಮವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದರು.

ಹಿಂದಿನ ಸಿಇಓ ಡಾ.ಸುಶೀಲಾ ಬಿ. ಅವರು ಡಾ. ಇಟ್ನಾಳ ಅವರಿಗೆ ಅಧಿಕಾರ ವಹಿಸಿಕೊಟ್ಟರು.

ಡಾ.ಸುರೇಶ ಇಟ್ನಾಳ ಅವರು ಬೆಳಗಾವಿ ಮತ್ತು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿ ಅಧಿಕಾರವಹಿಸಿಕೊಂಡರು.

ಈ ವೇಳೆ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನವರ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಯೋಜನಾ ನಿರ್ದೇಶಕ ಬಿ.ಎಸ್.ಮುಗನೂರಮಠ ಸೇರಿ ಜಿಲ್ಲಾ ಪಂಚಾಯತ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಸೂಫಿ ಸಂತರು ಶಿರಸಂಗಿ ಲಿಂಗರಾಜರ ಅಭಿನವ ಸಂಬಂಧಕ್ಕೆ ಸಾಕ್ಷಿಯಾಗಿದೆ:ಬಸವಲಿಂಗ ಶ್ರೀಗಳು.

eNEWS LAND Team

ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ: ಸಿಎಂ ಬೊಮ್ಮಾಯಿ

eNEWS LAND Team

ನೈಋತ್ಯ ರೈಲ್ವೆ: ಸೊಲ್ಲಾಪುರ – ಯಶವಂತಪುರ -ಸೊಲ್ಲಾಪುರ ವಿದ್ಯುದೀಕರಣ

eNewsLand Team