35 C
Hubli
ಮಾರ್ಚ್ 28, 2023
eNews Land
ರಾಜಕೀಯ

ಕೃಷಿ ಕಾಯ್ದೆ ಹಿಂತೆಗೆತವನ್ನು ರೈತ ಸಂಘಟನೆಗಳು ಸ್ವಾಗತಿಸುತ್ತಿವೆ : ಸಿಎಂ

Listen to this article

ಇಎನ್ಎಲ್ ಬೆಂಗಳೂರು

ಕೃಷಿ ಕಾಯ್ದೆಯ ಹಿಂತೆಗೆತವನ್ನು ರೈತ ಸಂಘಟನೆಗಳು ಸ್ವಾಗತಿಸುತ್ತವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಳ್ಳುವ ಮೂಲಕ ಪ್ರಧಾನ ಮಂತ್ರಿಯವರು ರೈತರಿಗೆ ಸ್ಪಂದಿಸಿದ್ದಾರೆ. ಯಾವುದೇ ಕಾನೂನನ್ನು ಪ್ರಜಾಪ್ರಭುತ್ವದಲ್ಲಿ ರೂಪಿಸುವ ಸಂದರ್ಭದಲ್ಲಿ ಅದರ ಬಗ್ಗೆ ಪರ ವಿರೋಧ ವಾದಗಳು ಬರುವ ಹಿನ್ನೆಲೆಯಲ್ಲಿ ನ್ಯಾಯಸಮ್ಮತವಾಗಿ ನಡೆದುಕೊಳ್ಳಬೇಕಾಗುತ್ತದೆ ಎನ್ನುವುದನ್ನು ಪ್ರಧಾನಿಗಳು ನಿರೂಪಿಸಿರುವುದು ಅವರ ದೊಡ್ಡ ಗುಣ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರೈತ ಸಂಘಟನೆಗಳು ಯಾವುದೇ ರಾಜಕೀಯ ಪಕ್ಷಗಳನ್ನು ಹೋರಾಟದಲ್ಲಿ ಭಾಗಿಯಾಗಿಸಿರಲಿಲ್ಲ ಹಾಗೂ ವೇದಿಕೆ ಹಂಚಿಕೊಂಡಿರಲಿಲ್ಲ. ಕಾಂಗೆಸ್ ಪಕ್ಷ ಇದು ಅವರ ಜಯ ಎಂದು ಭಾವಿಸುವುದು ತಪ್ಪು. ಇದರಿಂದ ಕಾಂಗ್ರೆಸ್ ಪಕ್ಷದ ರಾಜಕೀಯ ಕೆಳಮಟ್ಟಕ್ಕೆ ಇಳಿದಿರುವುದನ್ನು ಬಿಂಬಿಸುತ್ತದೆ ಎಂದು ಟೀಕಿಸಿದರು.

Related posts

ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚಿನಾವಣೆ: ನಾಳೆ ಕೋರ್ ಕಮಿಟಿ ಸಭೆ: ಮುಖ್ಯಮಂತ್ರಿ  ಬೊಮ್ಮಾಯಿ

eNewsLand Team

ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ

eNEWS LAND Team

100 ದಿನಗಳ ಆಡಳಿತದಲ್ಲಿ ದಿಟ್ಟ ಹೆಜ್ಜೆ ಸಿಎಂ

eNEWS LAND Team