eNews Land
ರಾಜಕೀಯ

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ: ಆಯೋಗದ ವರದಿ ಸಲ್ಲಿಕೆ ಬಳಿಕ ಕ್ರಮ: ಸಿಎಂ

Listen to this article

ಇಎನ್ಎಲ್ ಬೆಳಗಾವಿ

ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೂಡಲಸಂಗಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಹಾಗೂ ಸಮಾಜದ ಶಾಸಕರೊಂದಿಗೆ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ.

ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಪರಿಶೀಲಿಸಲಾಗುವುದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡಲಾಗಿದೆ. ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲಾಗುವುದು.

ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಎಲ್ಲೆಡೆಯಿಂದ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Related posts

ವಿಪ ಚುನಾವಣೆ ಫಲಿತಾಂಶ ಪ್ರಕಟಣೆಗೆ ಬಂದೋಬಸ್ತ್: ಡಿಸಿ

eNEWS LAND Team

ಕೋವಿಡ್ ಬಗ್ಗೆ ಜನತೆ ಗಾಬರಿಯಾಗಬೇಕಿಲ್ಲ ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಸಿಎಂ

eNEWS LAND Team

ಹುದ್ದೆ ಮುಖ್ಯ ಅಲ್ಲ, ಸಂಘಟನೆ ಮುಖ್ಯ: ಎಮ್.ಅರವಿಂದ

eNEWS LAND Team