35 C
Hubli
ಮಾರ್ಚ್ 29, 2024
eNews Land
ಸುದ್ದಿ

ಮಹಿಳೆಯರು ಆರ್ಥಿಕವಾಗಿ ಸಬಲರಾಗಿ: ಲಿಂಗರೆಡ್ಡಿ

ಇಎನ್ಎಲ್ ಕಲಘಟಗಿ: ಕೃಷಿಯಲ್ಲಿ ಗ್ರಾಮೀಣ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ಆದರೆ ಇಂದಿನ ಆಧುನಿಕ ಯುಗದಲ್ಲಿ ಆರ್ಥಿಕ ಸಾಕ್ಷರತೆಯೂ ಪ್ರಮುಖವಾಗಿದೆ. ಆದ್ದರಿಂದ ತಾವೆಲ್ಲರೂ ಈ ಕೇಂದ್ರವನ್ನು ಸದುಪಯೋಗ ಪಡಿಸಿಕೊಳ್ಳಿ. ಮುಕ್ಕಲ ಗ್ರಾಮದಲ್ಲಿ ಜರುಗಿದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಆರ್ಥಿಕ ಸಾಕ್ಷರತಾ ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾ.ಪಂ.ಅಧ್ಯಕ್ಷ ಲಿಂಗರೆಡ್ಡಿ ನಡುವಿನಮನಿ ತಾವೆಲ್ಲರೂ ಆರ್ಥಿಕ ಸಾಕ್ಷರತೆಯಲ್ಲಿ ನಿಪುಣರಾಗಿ, ಆಗ ದೇಶದ ಆರ್ಥಿಕ ಪ್ರಗತಿ ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ನಬಾರ್ಡನ ಜಿಲ್ಲಾ ಅಭಿವೃಧ್ಧಿ ಅಧಿಕಾರಿಗಳಾದ ಮಯೂರ ಕಾಂಬಳೆ ,ಜಿಲ್ಲಾ ಅಗ್ರಣಿಯ ಬ್ಯಾಂಕಿನ ಮುಖ್ಯ ಪ್ರಬಂಧಕ ಅಣ್ಣಯ್ಯ ಆರ್. ಕೆವಿಜಿ ಬ್ಯಾಂಕ್ ವ್ಯವಸ್ಥಾಕ ಎಸ್ ಬಾಲರತ್ನಂ, ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ವಿನಾಯಕ ಚಲವಾದಿ ಹಾಗೂ ಬಸವರಾಜ ಇಂದೂರ ಇವರಿಗೆ ಮುಕ್ಕಲ ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ಲಿಂಗರೆಡ್ಡಿ ನಡುವಿನಮನಿ ಪಿಡಿಓ ನಾಗರಾಜಕುಮಾರ ಬಿದರಳ್ಳಿ ಗ್ರಾ.ಪಂ.ಉಪಾಧ್ಯಕ್ಷ ಶ್ರೀಕಾಂತಗೌಡ ಪಾಟೀಲ. ಸದಸ್ಯರಾದ ನಿಂಗಪ್ಪ ಶಿಗ್ಗಾಂವಿ, ಮಂಜುಳಾ ಹರಿಜನ, ನಾಗವೇಣಿ ಹಸರಂಬಿ, ಸಹಾದೇವಪ್ಪ ಹೊರಕೇರಿ, ಯಲ್ಲವ್ವ ಓಲೇಕಾರ, ಕಾಂತಗೌಡ ಪಾಟೀಲ, ರತ್ನವ್ವ ಗಾಡಗೋಳಿ, ಸರೋಜಾ ಬಡಿಗೇರ, ಹಾಗೂ ಉಪಸ್ಥಿತರಿದ್ದರು.

Related posts

ಜಿ.ಪಂ ಸಿಬ್ಬಂದಿಗಳಿಗೆ ವಾರದಲ್ಲಿ ಒಂದು ದಿನ ಸಮವಸ್ತ್ರ

eNEWS LAND Team

ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶದ ಅಭಿವೃದ್ಧಿ ಉತ್ತುಂಗಕ್ಕೆ ಏರಲಿ: ಸಿಎಂ ಬೊಮ್ಮಾಯಿ

eNEWS LAND Team

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಬೆಳಗಾವಿ ಅಧಿವೇಶನ : ಸಿಎಂ

eNEWS LAND Team