ಇಎನ್ಎಲ್ ಧಾರವಾಡ: ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯಿoದ ಸಂಭ್ರಮದ ಸ್ವಾತಂತ್ರ್ಯೋತ್ಸವ ಲಿಂಗಾಯತ ವಿದ್ಯಾಭಿವೃದ್ಧಿ ಸoಸ್ಥೆಯ ಗೌರವ ಕಾರ್ಯದರ್ಶಿ ಚಂದ್ರಕಾoತ ಮಟ್ಟಿ ಇವರು ಧ್ವಜಾರೋಹಣವನ್ನು ನೇರವೇರಿಸಿದರು ಈ ಸಂದರ್ಭದಲ್ಲಿ ಜಂಟಿ ಕಾರ್ಯದರ್ಶಿ ಎಸ್.ಎಂ.ಅಗಡಿ, ಆಡಳಿತ ಮಂಡಳಿ ಸದಸ್ಯ ಬಿ.ಎಸ್.ತಾಳಿಕೋಟಿ ಅಂಗ ಸಂಸ್ಥೆಗಳಾದ ಬಸವಶ್ರೀ ಶಿಶುವಿಹಾರ, ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಕನ್ನಡ ಪ್ರೌಢ ಶಾಲೆ, ಅವ್ವಪ್ಪಣ್ಣ ಅತ್ತಿಗೇರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಜ್ಞಾನ, ಕಲಾ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯ ಮತ್ತು ಹುರಕಡ್ಲಿ ಅಜ್ಜ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರು ಶಿಕ್ಷಕ ಸಿಬ್ಬಂದಿ ಮತ್ತು ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕನ್ನಡ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
previous post