37 C
Hubli
ಮಾರ್ಚ್ 28, 2024
eNews Land
ಸಣ್ಣ ಸುದ್ದಿ

ತಹಶೀಲ್ದಾರ ಕಚೇರಿಗೆ ಬಂದಂತಹ ಸಾರ್ವಜನಿಕರಿಗೆ ಸಹಾಯ ಮಾಡಲು ಮುಂದಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ

ಇಎನ್ಎಲ್ ಕಲಘಟಗಿ: ತಾಲೂಕಿನ ತಹಶೀಲ್ದಾರ ಕಚೇರಿಯಲ್ಲಿ ಇಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಹಶೀಲ್ದಾರ ಕಚೇರಿಗೆ ಬಂದಂತಹ ಸಾರ್ವಜನಿಕರಿಗೆ ಸಹಾಯ ಮಾಡಲು ಎಂದು ಹಾಗೂ ವಿನಾಕಾರಣ ಅಧಿಕಾರಿಗಳಿಂದ ಆಗುತ್ತಿರುವ ವಿಳಂಬವನ್ನು ಪ್ರಶ್ನಿಸಲು ಮತ್ತು ಹೆಚ್ಚುವರಿ ಹಣ ಕೇಳುವ ಅಧಿಕಾರಿಗಳನ್ನು ಎಚ್ಚರಿಸುವ ಸಂಬಂಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಇಡೀ ರಾಜ್ಯಾದ್ಯಂತ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಅದರ ಭಾಗವಾಗಿ ಕಲಘಟಗಿ ತಹಸೀಲ್ದಾರ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಧಾರವಾಡ ಜಿಲ್ಲಾಧ್ಯಕ್ಷೆ ಸುಮಿತ್ರಾ ಹಳ್ಳಿಕೇರಿ ಉಪಾಧ್ಯಕ್ಷ ಜಹೀರ ಅಡ್ವಾಣಿ. ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಂತೋಷ ಕರಗೂಳಿ, ಕಲಘಟಗಿ ತಾಲೂಕ ಅಧ್ಯಕ್ಷ ಮಂಜುನಾಥ ಗಂಜಿಗಟ್ಟಿ ತಾಲೂಕ ಯುವ ಘಟಕದ ಅಧ್ಯಕ್ಷ ಶ್ರೀಧರ ಹಾಗೂ ಪಕ್ಷದ ಇತರೆ ಪದಾಧಿಕಾರಿಗಳು ಇದ್ದರು.

Related posts

ಉಣಕಲ್ ಕೆರೆಯನ್ನು ಶ್ರೀ ಚನ್ನಬಸವ ಸಾಗರವೆಂದು ನಾಮಕರಣ ಮಾಡಿ

eNEWS LAND Team

ಅಣ್ಣಿಗೇರಿ: ವ್ಯಸನ ಮುಕ್ತ ದಿನಾಚರಣೆ

eNewsLand Team

ಕೇವಲ 3ದಿನದ ಹೋರಿ ಕರು ಬಿಟ್ಟು ಅಗಲಿದ ಗೋ ಮಾತೆ

eNEWS LAND Team