24 C
Hubli
ಮಾರ್ಚ್ 21, 2023
eNews Land
ಸಣ್ಣ ಸುದ್ದಿ

ವಾಲ್ಮೀಕಿ ಸಮಾಜದಿಂದ ಮೀಸಲಾತಿಗೆ ಪ್ರತಿಭಟನೆ

Listen to this article

ಇಎನ್ಎಲ್ ಅಣ್ಣಿಗೇರಿ: ತಾಲೂಕಿನ ವಾಲ್ಮೀಕಿ ಸಮಾಜ ಭಾಂದವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಸರ್ಕಾರ ಎಸ್.ಟಿ.ವರ್ಗಕ್ಕೆ 7.5 ಮಿಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟಿಸಿ. ನಂತರ ತಹಶೀಲ್ದಾರ ಕಾರ್ಯಲಯಕ್ಕೆ ತೆರಳಿ ತಹಶೀಲ್ದಾರ ಮಂಜುನಾಥ ಅಮಾಸಿ ಅವರಿಗೆ ಮನವಿ ಸಲ್ಲಿಸಿದರು. ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಶ್ರೀಗಳು ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಪ್ರೀಡಂ ಪಾರ್ಕನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ತಾಲೂಕಿನ ವಾಲ್ಮೀಕಿ ಸಮಾಜ ಬಾಂಧವರು ಸಂಪೂರ್ಣ ಬೆಂಬಲಿಸುವುದಾಗಿ ಹಾಗೂ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದರು. ಸಮಾಜದ ಮುಖಂಡರಾದ ಮೋಹನ ಗುಡಸಲಮನಿ, ಯಲ್ಲಪ್ಪ ದುಂದೂರ, ಮಾರುತಿ ಮರಡ್ಡಿ, ರಾಮಣ್ಣ ದೊಡ್ಡಮನಿ, ಅಮೃತ ಹಂಚಿನಾಳ ಭೀಮಪ್ಪ ಜಂತ್ಲಿ, ಸರ್ಕಾರ ಎಸ್.ಟಿ ಸಮದಾಯಕ್ಕೆ 7.5 ಮಿಸಲಾತಿ ನೀಡುವಂತೆ ಒತ್ತಾಯಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಭರತಕುಮಾರ ಅಜ್ಜಣ್ಣವರ, ಹನಮಂತಪ್ಪ ನೈನಾಪೂರ, ಶಿವಾನಂದ ತಹಶೀಲ್ದಾರ, ಬಸವರಾಜ ಜಾಲಿಹಾಳ, ಸುಭಾಸಚಂದ್ರ ನಾಯಕ, ವಿರೇಶ ಗೊಬ್ಬರಗುಂಪಿ, ಮಂಜುನಾಥ, ಶಿವಕುಮಾರ ಅಂಗಡಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಮಾಜ ಮುಖಂಡರು ಉಪಸ್ಥಿತರಿದ್ದರು.

 

Related posts

ಮಾಜಿ ಸಚಿವ ಸಂತೋಷ್ ಲಾಡ್ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ದರ್ಶನ!!!

eNEWS LAND Team

15 ರಿಂದ 18 ವರ್ಷದವರಿಗೆ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ನಾಳೆ ಚಾಲನೆ

eNEWS LAND Team

ಗುದ್ನೇಶ್ವರ ಮಠದ ಪ್ರಭುಲಿಂಗ ಶ್ರೀಗಳಿಂದ ಜ್ಞಾನದೇಗುಲದ ಕಾರ್ತಿಕ ದೀಪೋತ್ಸವ

eNEWS LAND Team