ಇಎನ್ಎಲ್ ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಹಳೇ-ಹುಬ್ಬಳ್ಳಿಯ ಶ್ರೀ ವೀರಭದ್ರೇಶ್ವ ದೇವಸ್ಥಾನದ ಮಹಾರಥೋತ್ಸವದ ಅಂಗವಾಗಿ ಮಂಗಳವಾರ ಬೆಳ್ಳಿಗ್ಗೆ ನಡೆದ ಭವ್ಯ ಶೋಭಾ ಯಾತ್ರೆ ಮತ್ತು ಶ್ರೀ ವೀರಭದ್ರೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ ನೀಡಿದರು.
ವೀರಭದ್ರದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕರು, ಲೋಕ ಕಲ್ಯಾಣಾರ್ಥವಾಗಿ ನಡೆದ ಮಂಗಳ ಕಾರ್ಯಗಳು ಸಾಂಗವಾಗಿ ಸಾಗಲಿ. ಉತ್ತಮ ಮಳೆ, ಬೆಳೆಯಾಗಿ ನಾಡಿನ ಸಮಸ್ತ ಜನರಿಗೂ ಒಳಿತಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಾಸಕರು ಹೇಳಿದರು.
ಈ ಸಂದರ್ಭದಲ್ಲಿ ಶ್ರೀ ಭದ್ರೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಚಂದ್ರಶೇಖರ ಮಟ್ಟಿ, ಬಸವರಾಜ ಕಲ್ಯಾಣ ಶೆಟ್ಟರ್, ಪಾಲಿಕೆ ಮಾಜಿ ಸದಸ್ಯ ಬಶೀರ್ ಗುಡಮಾಲ್, ಸೇರಿದಂತೆ ಮೊದಲಾದವರು ಇದ್ದರು.