26 C
Hubli
ಏಪ್ರಿಲ್ 28, 2024
eNews Land
ರಾಜ್ಯ

ಗಡ್ಕರಿಯಿಂದ ಬೆಂಗಳೂರು ಮೈಸೂರು ಎಕ್ಸ್’ಪ್ರೆಸ್ ವೇ ವೈಮಾನಿಕ ಸಮೀಕ್ಷೆ ಇಂದು

ಇಎನ್ಎಲ್  ಬೆಂಗಳೂರು:

ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇಯನ್ನು ಈ ಬಾರಿಯ ವಿಧಾನಸಭಾ ಚುನಾವಣೆಗೂ ಮೊದಲು ಉದ್ಘಾಟನೆ ಮಾಡಲು ಸಿದ್ಧತೆಗಳು ನಡೆದಿವೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು (ಜನವರಿ 5) ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಲಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಎಕ್ಸ್​ಪ್ರೆಸ್​ ವೇಯ ವೈಮಾನಿಕ ತಪಾಸಣೆ ನಡೆಸಲಿದ್ದಾರೆ.

ಈಗಾಗಲೇ ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇಯ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೆಲವೆಡೆ ಇನ್ನೂ ಕೆಲಸಗಳು ಬಾಕಿ ಉಳಿದಿವೆ. ಕೆಂಗೇರಿಯಿಂದ ಮೈಸೂರಿಗೆ ಎಕ್ಸ್‌ಪ್ರೆಸ್‌ವೇ ಪ್ರಸ್ತುತ 3.5 ಗಂಟೆಗಳ ಪ್ರಯಾಣವನ್ನು ಕೇವಲ 1.5 ಗಂಟೆಗೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. 8,453 ಕೋಟಿ ರೂ. ವೆಚ್ಚದ ಈ ಯೋಜನೆಯು ಮುಂದಿನ ವರ್ಷ ಮಾರ್ಚ್‌ನಲ್ಲಿ ಉದ್ಘಾಟನೆಗೊಳ್ಳಲಿದೆ ಎನ್ನಲಾಗಿದೆ.

4,473 ಕೋಟಿ ರು. ವೆಚ್ಚದಲ್ಲಿ 118 ಕಿ.ಮೀ. ಉದ್ದದ ಈ ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇಯನ್ನು ನಿರ್ಮಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 10 ಲೇನ್ ಎಕ್ಸ್‌ಪ್ರೆಸ್‌ವೇ ಈ ಮಾರ್ಗದಲ್ಲಿ ಅಪಘಾತಗಳ ಸಂಖ್ಯೆಗೆ ಸುದ್ದಿಯಾಗಿದೆ. ಪೊಲೀಸ್ ಇಲಾಖೆಯ ಪ್ರಕಾರ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಳೆದ 6 ತಿಂಗಳಲ್ಲಿ 77 ಅಪಘಾತಗಳು ಉಂಟಾಗಿವೆ. ಈ ಅಪಘಾತಗಳಲ್ಲಿ ಒಟ್ಟು 28 ಜನರು ಪ್ರಾಣ ಕಳೆದುಕೊಂಡಿದ್ದು, 67 ಜನರು ಗಾಯಗೊಂಡಿದ್ದಾರೆ.

ಆದರೆ, NHAI (ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ) ಬೆಂಗಳೂರಿನಿಂದ ಮಂಡ್ಯಕ್ಕೆ ವಾಹನಗಳನ್ನು ಚಲಾಯಿಸಲು ಅನುಮತಿ ನೀಡಿದ್ದು, ಉಳಿದ ಮಾರ್ಗ ಇನ್ನೂ ಪೂರ್ಣಗೊಂಡಿಲ್ಲ. ಈ ರಸ್ತೆಯು 118 ಕಿಲೋಮೀಟರ್ ಉದ್ದವನ್ನು ಹೊಂದಿದೆ ಮತ್ತು ಉದ್ಘಾಟನೆಗೂ ಮುಂಚೆಯೇ ವಾಹನಗಳ ಭಾರೀ ಸಂಚಾರಕ್ಕೆ ಸಾಕ್ಷಿಯಾಗಿದೆ.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ನ ಬಹುತೇಕ ರಸ್ತೆಗಳು ಜನವರಿಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದ್ದು, ಮುಂದಿನ ವರ್ಷ ಮಾರ್ಚ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಸಾಧ್ಯತೆ ಇದೆ. ಎನ್‌ಎಚ್‌ಎಐ ಅಧಿಕಾರಿಗಗಳು ಹೇಳುವಂತೆ ಎಕ್ಸ್‌ಪ್ರೆಸ್‌ವೇಯಲ್ಲಿ 16 ಅಪಘಾತ ವಲಯಗಳಿದೆ. ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಯೋಜನೆಯು ಈ 262 ಕಿಮೀ ವಿಸ್ತಾರವು ಬೆಂಗಳೂರು ರಿಂಗ್ ರಸ್ತೆಯನ್ನು ಚೆನ್ನೈ ಹೊರ ವರ್ತುಲ ರಸ್ತೆಯೊಂದಿಗೆ ಸಂಪರ್ಕಿಸುತ್ತದೆ.

Related posts

ಸ್ವ ಸಹಾಯ ಸಂಘಗಳ ಉತ್ಪನ್ನಗಳ ಮಾರಾಟಕ್ಕೆ ಶಾಶ್ವತ ಮಾರುಕಟ್ಟೆ ವ್ಯವಸ್ಥೆ ಕೃಷಿ ಸಚಿವ- ಬಿ.ಸಿ.ಪಾಟೀಲ

eNEWS LAND Team

ಮುನ್ನಡೆ ಕಾಯ್ದುಕೊಂಡ ಶ್ರೀನಿವಾಸ ಮಾನೆ ಆದರೆ ಗೆಲ್ಲುವ ವಿಶ್ವಾಸದಲ್ಲಿ ಸಿಎಂ ಬೊಮ್ಮಾಯಿ

eNEWS LAND Team

ಕಾವೇರಿ ಹೆಚ್ಚುವರಿ ನೀರು ಸಮುದ್ರಕ್ಕೆ ಹರಿಯುವ ಬದಲು ರಾಜ್ಯದ ಹಿತಾಶಕ್ತಿಗೆ ಪೂರಕವಾಗಿ ತುರ್ತಾಗಿ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲಿ

eNEWS LAND Team