26.8 C
Hubli
ಏಪ್ರಿಲ್ 20, 2024
eNews Land
ರಾಜ್ಯ

ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ : ಸಿಎಂ

ಇಎನ್ಎಲ್ ಕೋಲಾರ

ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಕೋಲಾರ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಕೋವಿಡ್ ನಂತರ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಗೂ ಆರ್ಥಿಕ ಸಂಪನ್ಮೂಲಗಳ ಕ್ರೋಢೀಕರಣದ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕೋವಿಡ್ 2 ವರ್ಷದಲ್ಲಿ ದೇಶ ರಾಜ್ಯದಲ್ಲಿ ಆರ್ಥಿಕ ಹಿಂಜರಿತವಾಗಿತ್ತು. ಈಗ ಕೋವಿಡ್ 2 ನೇ ಅಲೆಯನ್ನು ವ್ಯಾಪಕವಾಗಿ ಲಸಿಕೆ ನೀಡುವ ಮುಖಾಂತರ ಯಶಸ್ವಿಯಾಗಿ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ರಂಗಗಳಲ್ಲೂ ಆರ್ಥಿಕ ಚಟುವಟಿಕೆ ಪ್ರಾರಂಭವಾಗಿ ಉತ್ತಮಗೊಂಡಿದೆ ಎಂದು ತಿಳಿಸಿದರು.

ಜಿಎಸ್ ಟಿ ಸಂಗ್ರಹ ಈಗ 1,30,000 ಕೋಟಿ ರೂ. ಕಳೆದ ತಿಂಗಳಲ್ಲಿ ಆಗಿದೆ. ಈ ಬಾರಿಯೂ ಕೂಡ 1,20,000 ಕೋಟಿ ರೂ. ಸಂಗ್ರಹದ ನಿರೀಕ್ಷೆ ಇದೆ. ಆರ್ಥಿಕತೆ ಅಭಿವೃದ್ಧಿಯ ಆಗುತ್ತಿರುವ ಬಗ್ಗೆ ಸ್ಪಷ್ಟ ದಿಕ್ಸೂಚಿ. ರಾಜ್ಯದಲ್ಲೂ ಕೂಡ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತಿದ್ದು, ಹಲವಾರು ಕ್ರಮಗಳನ್ನು , ಕೆಲವರಿಗೆ ಗುರಿಗಳನ್ನು ನೀಡಿ, ಅನುಸರಣೆ ಕಡಿಮೆ ಇರುವಲ್ಲಿ, ಅನುಸರಣೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಜಿಎಸ್ ಟಿ ಸಂಗ್ರಹದಲ್ಲಿ ರಾಜ್ಯದ ಪಾಲು ಮೂರು ತಿಂಗಳಿಗೊಮ್ಮೆ ಸರಿಯಾಗಿ ಬರುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
*ವಸತಿ ಯೋಜನೆಗಳ ಪ್ರಗತಿ:*
ಸಚಿವ ಸಂಪುಟದಲ್ಲಿ 5 ಲಕ್ಷಗಳ ಮನೆಗಳಿಗೆ ಮಂಜೂರಾತಿ ನೀಡಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿ, 4 ಲಕ್ಷ ಗ್ರಾಮೀಣ ಹಾಗೂ 1 ಲಕ್ಷ ನಗರ ಪ್ರದೇಶದಲ್ಲಿ ವಸತಿ ನಿರ್ಮಾಣಕ್ಕೆ ಆದೇಶ ನೀಡಲಾಗಿದೆ.

ಅಮೃತ ಯೋಜನೆಯಲ್ಲಿ 750 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಸತಿರಹಿತರಿಗೆ ಮನೆಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ. ಒಂದೂವರೆ ವರ್ಷದಲ್ಲಿ 4 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

Related posts

ಹುಬ್ಬಳ್ಳಿ ಸಿದ್ಧಾರೂಢಮಠ ಮೂರಸಾವಿರ ಮಠದ ದರ್ಶನ ಪಡೆದ ಜೆ.ಪಿ.ನಡ್ಡಾ

eNEWS LAND Team

ಡೆಲ್ಲಿಯಲ್ಲಿ ಕೂತು ಮಹಾದಾಯಿ ಬಗ್ಗೆ ಮಹತ್ವದ ಅಪ್ಡೇಟ್ ಕೊಟ್ಟ ಡಿಕೆಶಿ; ಏನದು?

eNewsLand Team

ಗಡಿನಾಡಿನಲ್ಲಿ ಕನ್ನಡದ ಕಂಪುನ್ನು ಹರಡಿದವರು ಕಯ್ಯಾರ ಕಿಞ್ಞಣ್ಣ ರೈ: ನಾಡೋಜ.ಡಾ.ಮಹೇಶ ಜೋಶಿ ಬಣ್ಣನೆ

eNEWS LAND Team