27 C
Hubli
ಏಪ್ರಿಲ್ 20, 2024
eNews Land
ರಾಜ್ಯ

ಸರಕಾರಿ ಜಾಗ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ವಸತಿ ಯೋಜನೆಗಳಿಗಾಗಿ 530 ಎಕರೆ ಜಮೀನು ನೀಡಿಕೆ:ಸಚಿವ ಅಶೋಕ

ಇಎನ್ಎಲ್ ಬೆಳಗಾವಿ ಸುವರ್ಣ ಸೌಧ:

ವಸತಿ ಯೋಜನೆಗಳಿಗಾಗಿ 530 ಎಕರೆ ಜಾಗವನ್ನು ವಸತಿ ಇಲಾಖೆಗೆ ಕಂದಾಯ ಇಲಾಖೆ ವತಿಯಿಂದ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ತಿಳಿಸಿದರು.
ಪರಿಷತ್‍ನಲ್ಲಿ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ಒಟ್ಟು 14,27,195 ಎಕರೆ ಸರಕಾರಿ ಜಮೀನು ಒತ್ತುವರಿಯಾಗಿದ್ದು,ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಪಡೆಯನ್ನು ರಚಿಸಲಾಗಿದೆ. ಅದರಂತೆ ಎಲ್ಲ ಜಿಲ್ಲಾಧಿಕಾರಿಗಳು ಕಾಲಬದ್ಧ ಕ್ರಿಯಾಯೋಜನೆ ಸಿದ್ದಪಡಿಸಿಕೊಂಡಿದ್ದು,ಒತ್ತುವರಿ ಆಗಿರುವ ಸರಕಾರಿ ಜಮೀನುಗಳನ್ನ ತೆರವುಗೊಳಿಸಲು ಕ್ರಮವಹಿಸುತ್ತಿದ್ದಾರೆ ಎಂದು ವಿವರಿಸಿದ ಅವರು ಸರಕಾರಿ ಜಾಗ ಒತ್ತುವರಿ ಮಾಡಿಕೊಂಡವರ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ;ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ರಾಜ್ಯದಲ್ಲಿ 1939672-21.09 ಎಕರೆ/ಗುಂಟೆ ಗೋಮಾಳ ಜಮೀನು ಇರುವುದನ್ನು ಸದನಕ್ಕೆ ತಿಳಿಸಿದರು.

Related posts

ಚಂಬೆಳಕಿನ ಮಹಾಬೆಳಗು; ಸಮನ್ವಯ ಕವಿ ಬಗ್ಗೆ ನಿಮಗೆಷ್ಟು ಗೊತ್ತು?

eNewsLand Team

ಪೆಟ್ರೋಲ್, ‌ಡೀಸೆಲ್ ಬೆಲೆ ಇಳಿಕೆ, ಇಂದು ಸಂಜೆ ಅಧಿಸೂಚನೆ: ಸಿಎಂ

eNEWS LAND Team

ಅಬಲೂರ ದೇವಸ್ಥಾನ ಅಭಿವೃದ್ಧಿಗೆ ರೂ.2.75 ಕೋಟಿ ಪ್ರವಾಸೋದ್ಯಮ ಸಚಿವ- ಆನಂದಸಿಂಗ್

eNEWS LAND Team