22 C
Hubli
ಸೆಪ್ಟೆಂಬರ್ 27, 2023
eNews Land
ರಾಜ್ಯ ವೈರಲ್ ಸುದ್ದಿ

ಹಿಜಾಬ್ V/S ಕೇಸರಿ ಶಾಲು ; ಸಿಎಂ ಸಭೆಯಲ್ಲಿ ಹೇಳಿದ್ದೇನು?

ಇಎನ್ಎಲ್ ಡೆಸ್ಕ್ : ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಡಿಸಿ , ಎಸ್.ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದ ಮುಖ್ಯಾಂಶಗಳು ಇವು.

1. ಸೋಮವಾರದಿಂದ ಪ್ರೌಢಶಾಲೆ ಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು.

2. ಸೂಕ್ಷ್ಮ ಜಿಲ್ಲೆಗಳಲ್ಲಿ ಪ್ರಮುಖ ಶಾಲೆಗಳನ್ನು ಎಸ್.ಪಿ ಹಾಗೂ ಡಿ.ಸಿ ಗಳು ಭೇಟಿ ಮಾಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಅಹಿತಕರ ಘಟನೆಗಳು ಆಗದಂತೆ ಎಚ್ಚರ ವಹಿಸಿ

3. ಶಾಲಾ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು ಹಾಗೂ ಆಡಳಿತ ಮಂಡಳಿಯೊಂದಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅವರು ನಿರಂತರ ಸಂಪರ್ಕ ಹೊಂದಿರಬೇಕು.

4. ಜಿಲ್ಲೆಯ ಹಿರಿಯರು, ಪ್ರಮುಖರು, ಜನಪ್ರತಿನಿಧಿಗಳೊಂದಿಗೂ ಸಹ ನಿರಂತರ ಸಂಪರ್ಕ ಹೊಂದುವುದು.

6 ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಶಾಂತಿ ಸಭೆಯನ್ನು ನಡೆಸಿ ಉಚ್ಚ ನ್ಯಾಯಾಲಯದ ಆದೇಶವನ್ನು ಅಕ್ಷರಶಃ ಪಾಲಿಸಬೇಕು.

7. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು.

8.ಯಾವುದೇ ಒತ್ತಡಕ್ಕೆ ಮಣಿಯಬಾರದು. ಸಣ್ಣ ಘಟನೆಯನ್ನೂ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು.

9. ಆದ್ಯತೆ ಮೇರೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದು.

10. ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸಭೆಗಳನ್ನು ನಡೆಸಬೇಕು.

11 . ಹೊರಗಿನ ಪ್ರಚೋದನಗೆ ಒಳಗಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರದೇಶಗಳನ್ನು ಹಂಚಿಕೆ ಮಾಡಿಕೊಂಡು ನಿಗಾ ವಹಿಸಬೇಕು.

12. ಎಲ್ಲಾ ರಾಜಕೀಯ ಪಕ್ಷಗಳನ್ನು, ಧಾರ್ಮಿಕ ಮುಖಂಡರನ್ನು ಸ್ಥಳೀಯ ಅಧಿಕಾರಿಗಳು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.

13. ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿ ಹಾಗೂ ಪ್ರಚೋದನಕಾರಿ ಸಂದೇಶಗಳು ಹರಡದಂತೆ ನಿಗಾ ವಹಿಸಿ.

14 ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.

15. ಪ್ರಾಂಶುಪಾಲರು ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಬೇಕು.

17. ಪ್ರತಿಯೊಬ್ಬರೂ ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಒಂದು ಅಹಿತಕರ ಘಟನೆ ಜರುಗದಂತೆ ಕಟ್ಟೆಚ್ಚರ ವಹಿಸಬೇಕು.

18. ಸಮಾಜಘಾತುಕ ಶಕ್ತಿಗಳನ್ನು ಗುರುತಿಸಿ ಅವರ ಮೇಲೆ ನಿಗಾ ವಹಿಸಲಾಗಿದೆ ಎಂಬ ಸಂದೇಶ ರವಾನಿಸಬೇಕು.

19. ಮೇಲಿನಿಂದ ಯಾವುದೇ ಆದೇಶಗಳಿಗೆ ಕಾಯದೇ, ಸಂದರ್ಭಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಬೇಕು.

20. ಮಾಧ್ಯಮಗಳಿಗೆ ಜಿಲ್ಲೆಗಳಲ್ಲಿನ ವಸ್ತುಸ್ಥಿತಿಯನ್ನು ಸರಿಯಾಗಿ ವಿವರಿಸಬೇಕು. ತಪ್ಪು ಮಾಹಿತಿ ಹೋಗದಂತೆ ಎಚ್ಚರ ವಹಿಸಬೇಕು.

ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಉಪಸ್ಥಿತರಿದ್ದರು.

Related posts

ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣ ಪ್ರಸ್ತಾಪ ಬಸವರಾಜ ಹೊರಟ್ಟಿ

eNEWS LAND Team

ಜ.21 ದಾಸೋಹ ದಿನಾಚರಣೆ

eNEWS LAND Team

ನನ್ನನ್ನು ಬೆತ್ತಲೆ ನೋಡಿದಾಗ ನಿಮಗೆ ನಾಚಿಕೆಯಾಗುತ್ತಿದೆಯೇ..? ಎಂದ ಸದಸ್ಯ

eNEWS LAND Team