37 C
Hubli
ಏಪ್ರಿಲ್ 25, 2024
eNews Land
ರಾಜ್ಯ

ಭಾರತ ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ : ಸಿಎಂ ಬೊಮ್ಮಾಯಿ

ಇಎನ್ಎಲ್ ದಾವಣಗೆರೆ

ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಸಂವಿಧಾನ ದಿನದ ಅಂಗವಾಗಿ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದ ನಂತರ ಮಾತನಾಡಿದರು.

ಈ ದಿನ ಸಂವಿಧಾನ ವನ್ನು ಅಂಗೀಕರಿಸಿದ ಮಹತ್ವದ ದಿನ. ಭಾರತದ ಸಂವಿಧಾನ ಇಶ್ವದ ಅತ್ಯಂತ ಶ್ರೇಷ್ಠ ಸಂವಿಧಾನ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಸಾಮಾಜಿ, ಆರ್ಥಿಕ, ಧಾರ್ಮಿಕ ಚಟುವಟಿಕೆಗಳಿಗೆ ಸ್ವಾತಂತ್ರ್ಯ ಜೊತೆಗೆ ಸಮಾನತೆ, ಭ್ರಾತೃತ್ವ, ಪರಸ್ಪರ ಪ್ರೀತಿ ವಿಶ್ವಾಸ, ಎಲ್ಲ ಧರ್ಮೀಯರ ಬಗ್ಗೆ ಗೌರವ ಮುಂತಾದ ಅಂಶಗಳನ್ನು ಈ ಸಂವಿಧಾನ ಒಳಗೊಂಡಿದೆ. ದೇಶದ ಉತ್ತಮ ಭವಿಷ್ಯಕ್ಕಾಗಿ ಈ ಸಂವಿಧಾನ. ರಚನೆ ಆಗಿದೆ ಎಂದು ತಿಳಿಸಿದರು.

ಮಾನವೀಯ ಗುಣಗಳಿರುವ ಭಾರತ ಸಂವಿಧಾನ : ದೇಶವನ್ನು ಮುನ್ನೆಡೆಸುವ ಬಗೆ, ಕಾನೂನು, ಹಕ್ಕು, ಕರ್ತವ್ಯ ಗಳ ಬಗ್ಗೆ ತೀರ್ಮಾನಿಸಲು ಸಂವಿಧಾನದ ಸಮಿತಿ ರಚನೆಯಾಯಿತು.. ಡಾ. ಅಂಬೇಡ್ಕರ್ ರವರ ನೇತೃತ್ವ ಸಮಿತಿ ನೀಡಿರುವ ಶ್ರೇಷ್ಠ ಸಂವಿಧಾನ. ಒಂದು ಪಕ್ಷ ಸಂವಿಧಾನವಿಲ್ಲದಿದ್ದರೆ ಭಾರತ ದೇಶದ ಐಕ್ಯತೆ, ಅಖಂಡತೆ, ನಾಗರಿಕ ಹಕ್ಕುಗಳು ಯಾವುದು ಕೂಡ ನೋಡಲು ಸಾಧ್ಯವಾಗುತ್ತಿರಲಿಲ್ಲ. ಈ ದೇಶವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ. ನಮ್ಮನ್ನಾಳಿದ ಬ್ರಿಟೀಷರಿಗೂ ಕೂಡ ಲಿಖಿತ ಸಂವಿಧಾನವಿಲ್ಲ. ಇಂಗ್ಲೆಡಿನಲ್ಲಿರುವ ಇವತ್ತಿನ ವ್ಯಕ್ತಿ ಸ್ವಾತಂತ್ರ್ಯ, ಕಾನೂನುಗಳನ್ನು ನೋಡಿದಾಗ ನಮ್ಮ ದೇಶದ ಕಾನೂನುಗಳು ಅತ್ಯಂತ ಶ್ರೇಷ್ಠವಾಗಿವೆ. ಬದುಕು, ತತ್ವಗಳು ಶಿಕ್ಷಣ, ಆಡಳಿತ, ತಂತ್ರಜ್ಞಾನದಲ್ಲಿಯೂ ಸಾಕಷ್ಟು ಬದಲಾವಣೆಯಾಗುತ್ತದೆ. ಬದಲಾವಣೆಗನುಗುಣವಾಗಿ ಅನುಗುಣವಾಗಿ ಸ್ಪಂದಿಸಲು ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟು ದೇಶದ ಸಂವಿಧಾನದಲ್ಲಿ ಜೀವಂತಿಕೆಯಿಂದಿದೆ ಎಂದು ತಿಳಿಸಿದರು.

ನಾಗರಿಕರು ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಪಾಲಿಸಬೇಕು: ನಾಗರಿಕರು ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ನೆನೆಪಿಸಿಕೊಳ್ಳುವುದು ಅವಶ್ಯ. ಯಾವ ದೇಶದಲ್ಲಿ ನಾಗರಿಕ ಕರ್ತವ್ಯಗಳಿರುತ್ತವೆಯೋ ಆ ದೇಶ ಬಲಿಷ್ಠವಾಗಿರುತ್ತದೆ. ನಾಗರೀಕ ಕರ್ತವ್ಯಗಳನ್ನು ಮರೆತಾಗ ಅರಾಜಕತೆ ಬರುತ್ತದೆ. ಭಾರತದಲ್ಲಿ ಪ್ರಜಾಪ್ರಭುತ್ವ ಉಳಿಯಲು ಪ್ರಜೆಗಳು ಜಾಗೃತರಾಗಿರುವ ಜೊತೆಗೆ ಕರ್ತವ್ಯ ಪ್ರಜ್ಞೆಯಿಂದಲೂ ಕೆಲಸ ಮಾಡಬೇಕು ಎಂದರು.

ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ :ಅಂಬೇಡ್ಕರ್ ಬಹಳ ದೊಡ್ಡ ಮಾನವತಾವಾದಿ. ಬುದ್ಧ, ಬಸವ ತತ್ವಜ್ಞಾನಿಗಳಿಂದ ಪ್ರಭಾವಿತರಾಗಿ ಅವರ ವಿಚಾರಧಾರೆಗಳುನ್ನು ನಮ್ಮ ಸಂವಿಧಾನದಲ್ಲಿ ಕಾಣಬಹುದಾಗಿದೆ. ಅಂಬೇಡ್ಕರ್ ಅವರು ಆಧುನಿಕ ಭಾರತದ ಪಿತಾಮಹ. 75 ವರ್ಷಗಳಲ್ಲಿ ಜಾಗತೀಕರಣ, ಉದಾರೀಕರಣ, ಖಾಸಗೀಕರಣ ಬಂದರೂ ಕೂಡ ನಮ್ಮ ದೇಶದಲ್ಲಿ ಅಂತ:ಕರಣ ಉಳಿದಿದೆ. ಸಂವಿಧಾನದ ಬಲದಿಂದ ಈ ಅಂತ:ಕರಣ ಉಳಿದಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿ, ಶೋಷಣೆಗೆ ಒಳಗಾದ ವ್ಯಕ್ತಿಯೂ ಕೂಡ ಧ್ವನಿ ಎತ್ತಿ ತನ್ನ ಹಕ್ಕುಗಳನ್ನು ಪ್ರತಿಪಾದಿಸುವ ಅವಕಾಶ ಮಾಡಿಕೊಟ್ಟ ಡಾ.ಅಂಬೇಡ್ಕರ್ ರವರು ಆಧುನಿಕ ಭಾರತದಲ್ಲಿ ಮಾನವೀಯ ಗುಣಗಳನ್ನು ಸಂವಿಧಾನದಲ್ಲಿ ಎತ್ತಿಹಿಡಿದಿದ್ದಾರೆ ಎಂದು ನುಡಿದರು.

ಅಂತಃಕರಣ ಮತ್ತು ತ್ಯಾಗದಿಂದ ಸಂವಿಧಾನ ಯಶಸ್ವಿ: ಅಂತಃಕರಣ ಮತ್ತು ತ್ಯಾಗ ಗುಣಗಳಿಂದ ವಿವಿಧ ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ ಭಾರತದಲ್ಲಿ ಸಂವಿಧಾನ ಯಶಸ್ವಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವವರು ಈ ಸಂವಿಧಾನವನ್ನು ಶತಪ್ರತಿಶತ ಪರಿಪಾಲನೆ ಮಾಡುವ ಅವಶ್ಯಕತೆ ಇದೆ. ಸಂವಿಧಾನದ ಮೂಲಕ ರಾಜ್ಯ ಹಾಗೂ ನಮ್ಮೂರ ಬದುಕಿನ ಕಾಣಬೇಕಾಗಿದೆ. ವ್ಯಕ್ತಿಯ ಆರ್ಥಿಕ, ಸಾಮಾಜಿಕ ಅಭಿವೃದ್ಧಿಯ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

ದಾವಣಗೆರೆ, ನವೆಂಬರ್ 26: ಸಂವಿಧಾನ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದರು.

ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಸಂಸದ ಜಿ.ಎಂ ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ರಾಜ್ಯದ ಯಶೋಗಾಥೆಯಲ್ಲಿ ಭಾಗಿಯಾಗಿ: ಹೂಡಿಕೆದಾರರಿಗೆ ಮುಖ್ಯಮಂತ್ರಿ ಆಹ್ವಾನ

eNewsLand Team

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್ : ಸಿಎಂ ಬೊಮ್ಮಾಯಿ

eNEWS LAND Team

ರಾಜ್ಯಪಾಲರ ಪ್ರವಾಸ

eNEWS LAND Team