ಇದನ್ನು ಓದಿ:ಪಿಎಂ-ಕಿಸಾನ್ ಕರ್ನಾಟಕ:47.86 ಲಕ್ಷ ರೈತರಿಗೆ ರಾಜ್ಯದ ಕಂತು 956.71 ಕೋಟಿ ರು. ಬಿಡುಗಡೆ
ಇಎನ್ಎಲ್ ಹುಬ್ಬಳ್ಳಿ: ಧ್ವನಿವರ್ಧಕ ಆದೇಶ ಪಾಲಿಸದವರಿಗೆ ಗುಂಡು ಹೊಡೆಯುತ್ತೇನೆ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಇದನ್ನು ಓದಿ:ಧಾರವಾಡ ಎಸ್ಎಸ್ಎಲ್ಸಿ ಸಾಧಕರಿಗೆ ಸನ್ಮಾನಿಸಿ ಡಿಸಿ ಹೇಳಿದ್ದೇನು?
ಮುಂಜಾನೆ 5 ಗಂಟೆಗೆ ಶಬ್ದಮಾಲಿನ್ಯ ಮಾಡುವ ಧ್ವನಿವರ್ಧಕಗಳ ನಿರ್ಬಂಧದ ಕುರಿತಾದ ಸರ್ಕಾರದ ಆದೇಶವನ್ನು ಯಾರೂ ಪಾಲಿಸುತ್ತಿಲ್ಲ. ನನಗೆ ಅಧಿಕಾರ ನೀಡಿದರೆ 24 ಗಂಟೆಗಳಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸುತ್ತೇನೆ.
ಮಸೀದಿ,ಚರ್ಚ್,ದೇವಾಲಯ, ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ಸ್ಪೀಕರ್ ಬಳಕೆ ವಿಚಾರದಲ್ಲಿ ಸರ್ಕಾರಕ್ಕೆ ನೀಡಿದ ಗಡುವು ಮುಗಿದಿದೆ. ಆದ್ದರಿಂದ ಜೂ.8 ರಂದು ಬಿಜೆಪಿ ಶಾಸಕರ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.
ಇದನ್ನು ಓದಿ:ರೈಲಿನಲ್ಲಿ ₹ 4.72ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಲೌಡ್ಸ್ಪೀಕರ್ ಬಳಸಲು ಧಾರ್ಮಿಕ ಕೇಂದ್ರಗಳು ಅನುಮತಿ ಪಡೆಯಬೇಕು. ರಾತ್ರಿ 10 ಗಂಟೆ ಬಳಿಕ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿ ಹದಿನೈದು ದಿನಗಳ ಗಡವು ನೀಡಿತ್ತು. ಆದರೆ ಈವರೆಗೆ ಯಾವುದೇ ನಿಯಮಗಳು ಜಾರಿಯಾಗಿಲ್ಲ. ಸರ್ಕಾರದ ಸುತ್ತೋಲೆ ಕಸದ ಬುಟ್ಟಿಗೆ ಸೇರಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ:ಸರ್ಕಾರಿ ನೌಕರರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರ ಚಾಲನೆ : ಮುಖ್ಯಮಂತ್ರಿ ಬೊಮ್ಮಾಯಿ
ಹಿಂದೂ ಸಂಘಟನೆಗಳಿಂದ ಹಾಗೂ ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ. ಹಿಂದೂಗಳು ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿಕೊಂಡಿರುವುದು ಏಕೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ಇದನ್ನು ಓದಿ:ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಶೀಘ್ರ ತೀರ್ಮಾನ : ಸಿಎಂ ಬೊಮ್ಮಾಯಿ
ಕಾಶ್ಮೀರದಲ್ಲಿ 375 ನೇ ವಿಧಿ ರದ್ದು ಮಾಡಿ ಕೇಂದ್ರ ಸರ್ಕಾರ ಆಡಳಿತ ಮಾಡುತ್ತಿದ್ದರು ಸಹಿತ ಅಲ್ಲಿ ಹಿಂದೂಗಳ ಮಾರಣ ಹೋಮವಾಗುತ್ತಿವೆ. ಕಳೆದ 1 ತಿಂಗಳಲ್ಲಿ 7 ಜನರ ಕೊಲೆಯಾಗಿದೆ. ಹಿಂದೂಗಳ ಕೊಲೆಯಾಗುತ್ತಿರುವುದು ನೋವಿನ ಸಂಗತಿ. ಹಿಂದೂಗಳಿಗೆ ಸರ್ಕಾರ ರಕ್ಷಣೆ ನೀಡಬೇಕು. ಇಲ್ಲದೇ ಹೋದಲ್ಲಿ ಕಾಶ್ಮೀರ ಚಲೋ ಅಭಿಯಾನ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದನ್ನು ಓದಿ:ವಿಧಾನ ಪರಿಷತ್ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ-2022 ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…