28 C
Hubli
ಸೆಪ್ಟೆಂಬರ್ 21, 2023
eNews Land
ರಾಜ್ಯ

ಮೂವರು ಶಿಕ್ಷಕರು ಅಮಾನತು : ಚುನಾವಣಾ ಕರ್ತವ್ಯ ಲೋಪ

ಇಎನ್ಎಲ್ ಬ್ಯೂರೋ

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭೆ ಉಪಚುನಾವಣೆಗೆ ಸಂಬಂಧಪಟ್ಟಂತೆ ಚುನಾವಣಾ ಕಾರ್ಯಕ್ಕೆ ನೇಮಿಸಿದ ಮೂವರು ಶಿಕ್ಷಕರು ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಪಿ.ಸುನಿಲಕುಮಾರ ಆದೇಶಿಸಿದ್ದಾರೆ.

ಸಿಂದಗಿ ವಿದ್ಯಾನಗರದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ನಂ-4 ಶಾಲೆಯ ವಿ.ವಿ.ನಿಂಬರ್ಗಿ ಸ.ಶಿ., ಎಸ್.ಆರ್. ಸಿಂದಗಿ ಹಾಗೂ ಆರ್.ಎ.ಕಠಾರೆ. ಸ.ಶಿ. ಇವರನ್ನು ಅಮಾನತು ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ಈ ಮೂವರು ಶಿಕ್ಷಕರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ. ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ಆಪಾದಿತ ನೌಕರರು ಈ ಅವಧಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದೂ ನಿರ್ದೇಶನ ನೀಡಲಾಗಿದೆ. ಸದರಿ ಆದೇಶವು ತಕ್ಷಣದಿಂದ ಜಾರಿಯಲ್ಲಿ ಬಂದಿದ್ದು, ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ನೌಕರರನ್ನು ಕರ್ತವ್ಯದಿಂದ ಇಂದೇ ಬಿಡುಗಡೆ ಮಾಡಿ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Related posts

ರಾಜ್ಯದ ಎಲ್ಲ ಪ್ರಾದೇಶಿಕ ವಲಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ : ಸಿಎಂ

eNewsLand Team

ಹೊಸ ವರ್ಷಾಚರಣೆಯ ಗುಂಗಿನಲ್ಲಿ ಇದ್ದವರಿಗೆ ರಾಜ್ಯ ಸರ್ಕಾರ ಶಾಕ್! ನೈಟ್ ಕರ್ಫ್ಯೂ ಮತ್ತೆ ಜಾರಿ

eNewsLand Team

ವಾಲ್ಮೀಕಿ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಲಾರ್ಪಣೆ

eNEWS LAND Team