24.8 C
Hubli
ಏಪ್ರಿಲ್ 25, 2024
eNews Land
ರಾಜ್ಯ

ಮೂವರು ಶಿಕ್ಷಕರು ಅಮಾನತು : ಚುನಾವಣಾ ಕರ್ತವ್ಯ ಲೋಪ

ಇಎನ್ಎಲ್ ಬ್ಯೂರೋ

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭೆ ಉಪಚುನಾವಣೆಗೆ ಸಂಬಂಧಪಟ್ಟಂತೆ ಚುನಾವಣಾ ಕಾರ್ಯಕ್ಕೆ ನೇಮಿಸಿದ ಮೂವರು ಶಿಕ್ಷಕರು ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಪಿ.ಸುನಿಲಕುಮಾರ ಆದೇಶಿಸಿದ್ದಾರೆ.

ಸಿಂದಗಿ ವಿದ್ಯಾನಗರದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ನಂ-4 ಶಾಲೆಯ ವಿ.ವಿ.ನಿಂಬರ್ಗಿ ಸ.ಶಿ., ಎಸ್.ಆರ್. ಸಿಂದಗಿ ಹಾಗೂ ಆರ್.ಎ.ಕಠಾರೆ. ಸ.ಶಿ. ಇವರನ್ನು ಅಮಾನತು ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ಈ ಮೂವರು ಶಿಕ್ಷಕರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ. ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ಆಪಾದಿತ ನೌಕರರು ಈ ಅವಧಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದೂ ನಿರ್ದೇಶನ ನೀಡಲಾಗಿದೆ. ಸದರಿ ಆದೇಶವು ತಕ್ಷಣದಿಂದ ಜಾರಿಯಲ್ಲಿ ಬಂದಿದ್ದು, ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ನೌಕರರನ್ನು ಕರ್ತವ್ಯದಿಂದ ಇಂದೇ ಬಿಡುಗಡೆ ಮಾಡಿ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Related posts

ಉಪಚುನಾವಣೆ: ಅ.17 ರಿಂದ ಹಾನಗಲ್ ನಲ್ಲಿ ಪ್ರಚಾರ ಸಿ.ಎಂ

eNEWS LAND Team

ಸಿದ್ದರಾಮಯ್ಯ ತಾವು ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತಿದ್ದಾರೆ; ಬಿಎಸ್ವೈ

eNEWS LAND Team

ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆ ಭರ್ತಿ ಪರಿಶೀಲನೆ

eNEWS LAND Team