eNews Land
ರಾಜ್ಯ

ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ: ರೆಕಾರ್ಡ್!!

Listen to this article

ಇಎನ್ಎಲ್ ಧಾರವಾಡ

ವಿಧಾನಪರಿಷತ್ತಿನ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಅವರು ಸಹಾಯಕ ಚುನಾವಣಾಧಿಕಾರಿ, ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ದ್ವಿಪ್ರತಿಯಲ್ಲಿ ನಾಮಪತ್ರಗಳನ್ನು ಪ್ರತ್ಯೇಕವಾಗಿ ಸಲ್ಲಿಸಿದರು.
ಮೊದಲ ಬಾರಿ ಸಲ್ಲಿಸುವಾಗ ಪತ್ನಿ ಹೇಮಲತಾ ಹೊರಟ್ಟಿ, ಎನ್.ಎನ್‌.ಸವಣೂರ, ಎರಡನೇ ಬಾರಿ ನಾಮಪತ್ರ ಸಲ್ಲಿಸುವಾಗ ವಿ.ಎಸ್.ಹುದ್ದಾರ,ಶ್ಯಾಮ ಮಲ್ಲನಗೌಡರ ಇದ್ದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಂಗಳವಾರ 2 ಪ್ರತಿ ನಾಮಪತ್ರ ಸಲ್ಲಿಸಿದ್ದೇನೆ. ಮೇ 26ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಬಂದು ಮತ್ತೊಂದು ನಾಮಪತ್ರ ಸಲ್ಲಿಸುತ್ತೇನೆ’ ಎಂದರು.

‘ದೇಶದ ಇತಿಹಾಸದಲ್ಲೇ ಶಿಕ್ಷಕರ ಕ್ಷೇತ್ರದಿಂದ ಏಳು ಬಾರಿ ಯಾರೂ ಗೆದ್ದಿಲ್ಲ. 8ನೇ ಬಾರಿ ಆಯ್ಕೆಯಾದಲ್ಲಿ ದಾಖಲೆ ಆಗಲಿದೆ. ಅದಕ್ಕಾಗಿಯೇ ಎಲ್ಲರೂ ನನ್ನತ್ತ ಒಲವು ತೋರಿಸುತ್ತಿದ್ದಾರೆ’ ಎಂದರು.

ತಮ್ಮ ಅಂಬಾಸೆಡರ್ ಕಾರಿನ ಕುರಿತು ಮಾತನಾಡಿದ ಹೊರಟ್ಟಿ, ಈ ಕಾರಿನ ಮೇಲೆ ನನಗೇನೋ ಭಾವನಾತ್ಮಕ ಸಂಬಂಧ. ಆ ಪ್ರೀತಿಗಾಗಿ ಕಾರು ತೆಗೆದುಕೊಂಡು ಬಂದಿದ್ಧೇನೆ. ಈವರೆಗೂ 8 ಲಕ್ಷ ಕಿ.ಮೀ. ಓಡಿದೆ. ಶುಭಕಾರ್ಯಗಳಿಗೆ ಈ ಕಾರು ಒಳ್ಳೆಯದು ಎಂಬ ನಂಬಿಕೆ ನಮ್ಮದು. ಹೀಗಾಗಿ ಅಂಥ ಸಂದರ್ಭದಲ್ಲಿ ಈ ಕಾರು ಬಳಸುತ್ತೇವೆ ಎಂದರು.

Related posts

ಹುಬ್ಬಳ್ಳಿ : ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ‌.

eNEWS LAND Team

ಸ್ತ್ರೀಶಕ್ತಿ ಸಂಘದಲ್ಲಿದ್ದಿರಾ? ಇಲ್ಲಿದೆ ಗುಡ್ ನ್ಯೂಸ್‌ ಅಕ್ಟೋಬರ್ 2ಕ್ಕೆ..

eNewsLand Team

ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ ಘೋಷಣೆ; ಮೇ 19ಕ್ಕೆ ಅಧಿಸೂಚನೆ  -ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

eNewsLand Team