27 C
Hubli
ಮಾರ್ಚ್ 28, 2023
eNews Land
ರಾಜ್ಯ

ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊಣೆ: ಬಸವರಾಜ ಬೊಮ್ಮಾಯಿ

Listen to this article

ಇಎನ್ಎಲ್ ಬೆಳಗಾವಿ

ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ನಡೆದ ಪ್ರಕರಣದ ಬಗ್ಗೆ ಮಾತನಾಡಿದರು.

ಕೆಲವರು ಕಾನೂನು ಬಾಹಿರವಾಗಿ ಪುಂಡಾಟಿಕೆ ಮಾಡಿದ್ದಾರೆ. ಕರ್ನಾಟಕದ ಕಾನೂನು ಸುವ್ಯವಸ್ಥೆ ನಮ್ಮ ಜವಾಬ್ದಾರಿ. ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ತೆ ಕಾಪಾಡಿಕೊಳ್ಳುವುದು ಅಲ್ಲಿನ ಸರ್ಕಾರದ ಜವಾಬ್ದಾರಿ. ಅಲ್ಲಿನ ಕನ್ನಡಿಗರ ರಕ್ಷಣೆ ಹಾಗೂ ಬಸ್ಸು ಇತ್ಯಾದಿ ವಾಹನಗಳ ರಕ್ಷಣೆ ಮಾಡಲು ನಮ್ಮ ಪೋಲಿಸ್ ವiಹಾ ನಿರ್ದೇಶಕರು ಅಲ್ಲಿನ ಪೊಲೀಸ್ ಮಹಾನಿರ್ದೇಶಕರೊಂದಿಗೆ ಹಾಗೂ ಗೃಹ ಸಚಿವರು ಮಹಾರಾಷ್ಟ್ರದ ಗೃಹ ಸಚಿವರು ರೊಂದಿಗೆ ಮಾತನಾಡಲಿದ್ದಾರೆ. ಮೊದಲು ಅಧಿಕಾರಿಗಳು ಮಾತನಾಡುತ್ತಾರೆ. ನಂತರ ಅಗತ್ಯ ಬಿದ್ದರೆ ಅಲ್ಲಿನ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದರು.

ಶಿವಸೇನೆಯ ಸಂಜಯ್ ರಾವತ್ ಅವರು ಮರಾಠಿಗಳು ಒಂದಾಗುವಂತೆ ಕರೆ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಜವಾಬ್ದಾರಿ ಇರುವ ಜನರು ಯಾರನ್ನೂ ಯಾವ ಸಮಯದಲ್ಲಿಯೂ ಪ್ರಚೋದನೆ ಮಾಡಬಾರದು. ಛತ್ರಪತಿ ಶಿವಾಜಿ, ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ, ದೇಶವನ್ನು ಒಗ್ಗೂಡಿಸಿದವರು. ಅವರ ಹೆಸರಿನಲ್ಲಿ ನಾವು ಜಗಳವಾಡಿಕೊಂಡು ಒಡಕು ಮೂಡಿಸಿದರೆ ಅದು ಅವರ ಹೋರಾಟಕ್ಕೆ ಅನ್ಯಾಯವೆಸಗಿದಂತಾಗುತ್ತದೆ. ಕಾನೂನನ್ನ ಕೈಗೆ ತೆಗೆದುಕೊಂಡು ಯಾರನ್ನೂ ಇಂತಹ ಕೆಲಸಗಳನ್ನು ಮಾಡಲು ಕುಮ್ಮಕ್ಕು ನೀಡಬಾರದು ಎಂದರು.

Related posts

ಬೆಂಗಳೂರಿನ ಸಮಗ್ರ ರಸ್ತೆಗಳ ದುರಸ್ತಿಯನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಲಾಗುವುದು ಸಿಎಂ

eNewsLand Team

ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ ಘೋಷಣೆ; ಮೇ 19ಕ್ಕೆ ಅಧಿಸೂಚನೆ  -ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

eNewsLand Team

ಪ್ರಧಾನಿ ಮೋದಿಯಿಂದ ಸಿಎಂ ಬೊಮ್ಮಾಯಿಗೆ ಕರೆ

eNewsLand Team